ADVERTISEMENT

ತುಮಕೂರು| ಮತಪಟ್ಟಿ ಪರಿಷ್ಕರಣೆ: ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 15:43 IST
Last Updated 21 ಜನವರಿ 2020, 15:43 IST
ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ಮಣಿವಣ್ಣನ್ ಅವರು ಜಿಲ್ಲೆಯ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕಿನ ವಿವಿಧ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.
ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ಮಣಿವಣ್ಣನ್ ಅವರು ಜಿಲ್ಲೆಯ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕಿನ ವಿವಿಧ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.   

ತುಮಕೂರು: ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ಮಣಿವಣ್ಣನ್ ಅವರು ಜಿಲ್ಲೆಯ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕಿನ ವಿವಿಧ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೋನಿ, ಮಧುಗಿರಿ ತಾಲ್ಲೂಕಿನ ಕೆರೆಗಳ ಪಾಳ್ಯ ಹಾಗೂ ಪಾವಗಡ ತಾಲ್ಲೂಕಿನ ರಾಜವಂತಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.

ಕೊರಟಗೆರೆ ತಾಲ್ಲೂಕಿನ ಮತಗಟ್ಟೆ ಸಂಖ್ಯೆ 199ರ ಮನೆಯೊಂದಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬವೊಂದು ಹಳೆಯ ಹಾಗೂ ಹೊಸ ಎಪಿಕ್ ಕಾರ್ಡು(ಮತದಾರರ ಗುರುತಿನ ಚೀಟಿ)ಗಳನ್ನು ಹೊಂದಿರುವುದು ವೀಕ್ಷಕರ ಗಮನಕ್ಕೆ ಬಂದಾಗ ಮತದಾರರು ಎರಡೆರಡು ಕಾರ್ಡು ಹೊಂದದೆ ಮಾನ್ಯ ಇರುವ ಎಪಿಕ್ ಕಾರ್ಡನ್ನೇ ಹೊಂದಿರಬೇಕು. ಅಧಿಕಾರಿಗಳು ಎಲ್ಲ ಮತದಾರರು ಮಾನ್ಯ ಕಾರ್ಡು ಹೊಂದಿರುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ADVERTISEMENT

ರಾಜವಂತಿ ಗ್ರಾಮದ ಮತದಾರ ತಿಮ್ಮರಾಜು ಅವರ ಮನೆಗೆ ತೆರಳಿ ಮತದಾರರ ಸಂಖ್ಯೆ, ಮತದಾರರ ಗುರುತಿನ ಚೀಟಿ, ಮತ್ತಿತರ ಮಾಹಿತಿ ಪಡೆದ ಅವರು, ಮತದಾರರ ಹೆಸರು ಮತಪಟ್ಟಿಯಲ್ಲಿರುವ ಬಗ್ಗೆ ಪರಿಶೀಲಿಸಿದರು.

ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ 18ವರ್ಷ ಮೇಲ್ಪಟ್ಟ ಎಲ್ಲಾ ಅರ್ಹ ಮತದಾರರು ಕಡ್ಡಾಯವಾಗಿ ಹೊಸ ಮತದಾರರ ಗುರುತಿನ ಚೀಟಿ ಹೊಂದಿರಬೇಕು. ಮತಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ರಾಜವಂತಿಯ ಬಿಎಲ್‍ಓ ಕರಿಯಣ್ಣ ಅವರ ಕಾರ್ಯವನ್ನು ಅವರು ಈ ಸಂದರ್ಭದಲ್ಲಿ ಶ್ಲಾಘಿಸಿದರು.

ಮಧುಗಿರಿ ಉಪವಿಭಾಗಾಧಿಕಾರಿಗಳ ಕಚೇರಿಗೆ ‌ತೆರಳಿ ಬಡವನಹಳ್ಳಿ ಗ್ರಾಮದ ಮತದಾರರ ಪಟ್ಟಿ, ನಮೂನೆ-6, 6ಎ, 7, 8, 8ಎ ಮೂಲಕ ಸ್ವೀಕೃತ ಅರ್ಜಿ ಹಾಗೂ ವಿಲೇವಾರಿಯಾದ ಅರ್ಜಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಧಿಕಾರಿ ಡಾ.ಕೆ.ಆರ್.ನಂದಿನಿ ದೇವಿ, ತಹಶೀಲ್ದಾರರಾದ ಗೋವಿಂದರಾಜು, ನಂದೀಶ್ ವರದರಾಜು, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಿರಸ್ತೇದಾರ್ ನಾಗಭೂಷಣ್ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.