ಶಿರಾ: ತಾಲ್ಲೂಕಿನ ಮದಲೂರು ಕೆರೆಗೆ ಕಳೆದ ಮೂರು ದಿನಗಳಿಂದ ಸ್ಥಗಿತಗೊಂಡಿದ್ದ ಹೇಮಾವತಿ ನೀರು ಮತ್ತೇ ಹರಿಯುತ್ತಿರುವುದು ರೈತರಲ್ಲಿ ಸಂತಸ ಮೂಡಿಸಿದೆ.
ನವಂಬರ್ 30 ರಂದು ಮದಲೂರು ಕೆರೆಗೆ ನೀರು ಸೋಮವಾರದಿಂದ ಸ್ಥಗಿತಗೊಂಡಿದ್ದು, ನಾಲೆ ಹಾದು ಬರುವ ಮಾರ್ಗದಲ್ಲಿರುವ ಅಜ್ಜೇನಹಳ್ಳಿ, ಭೂಪಸಂದ್ರ, ಮಾಯಸಂದ್ರ, ಚಿಕ್ಕಗೂಳ ಸೇರಿದಂತೆ ಈ ಭಾಗ ಜನರು ನಾಲೆಗೆ ಪೈಪ್ ಹಾಕಿ ನೀರನ್ನು ಅವರ ಊರುಗಳ ಕೆರೆಗಳಿಗೆ ಹರಿಸಿಕೊಳ್ಳಲು ಮುಂದಾದ ಹಿನ್ನಲೆಯಲ್ಲಿ ಮದಲೂರು ಕೆರೆಗೆ ಹರಿಯುತ್ತಿದ್ದ ನೀರು ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
ಭೂಪಸಂದ್ರ ಮತ್ತು ಅಜ್ಜೇನಹಳ್ಳಿ ಭಾಗದ ರೈತರು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರನ್ನು ಭೇಟಿಯಾಗಿ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಕನಿಷ್ಠ ಒಂದು ವಾರ ನೀರು ಹರಿಸುವಂತೆ ಮನವಿ ಮಾಡಿದ್ದರು.
ಶಾಸಕರು ಇವರಿಗೆ ಯಾವುದೇ ರೀತಿಯ ಭರವಸೆಯನ್ನು ನೀಡಿರಲಿಲ್ಲ. ಬುಧವಾರ ಅಧಿಕಾರಿಗಳು ತೆರಳಿ ನಾಲೆಯಲ್ಲಿ ಹಾಕಿದ್ದ ಪೈಪ್ಗಳನ್ನು ಹಾಗೂ ಅಡ್ಡವಾಗಿ ಹಾಕಿದ್ದ ಮಣ್ಣನ್ನು ತೆರವುಗೊಳಿಸಿ ಮದಲೂರು ಕೆರೆಗೆ ನೀರು ಹರಿಯುವಂತೆ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.