ತುಮಕೂರು:'ಶಾಸಕರು ರಾಜೀನಾಮೆ ನೀಡಲು ವಿಧಾನಸೌಧಕ್ಕೆ ಬಂದಿದ್ದಾರೆ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲಾರೆ, ಅದನ್ನು ನಿಭಾಯಿಸಲು ಹಿರಿಯ ನಾಯಕರು ಇದ್ದಾರೆ' ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿಯ ಕಾಮಗಾರಿಗಳನ್ನು ಪರಿಶೀಲಿಸುತ್ತಲೇ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಉತ್ತರ ನೀಡಿದರು.
ಇದನ್ನೂ ಓದಿ:ಮದ್ದಿಲ್ಲದ ರೋಗ; ಮಧ್ಯಂತರ ರಾಗ
'ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯರ ಜಂಟಿ ನಾಯಕತ್ವದಲ್ಲಿ ಸರ್ಕಾರ ಭದ್ರವಾಗಿದೆ. ಬಿಜೆಪಿ ಅವರು ಈ ಮೊದಲು ಒಳಗೊಳಗೆ ಅಪರೇಷನ್ಗಳನ್ನು ಮಾಡಲು ಸೋತರು. ಈಗ ಬಹಿರಂಗ ಪ್ರದರ್ಶನ ಶುರು ಮಾಡಿದ್ದಾರೆ. ನಮ್ಮ ಸರ್ಕಾರಗಳನ್ನು ಉಳಿಸುವ ಅನಿವಾರ್ಯತೆ ಬಂದರೆ ಬಿಜೆಪಿಯಿಂದ ಶಾಸಕರನ್ನು ಸೆಳೆಯಲು ಬ್ರಹ್ಮಾಸ್ತ್ರ ಪ್ರಯೋಗ ಮಾಡಲಿದ್ದಾರೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.