ADVERTISEMENT

ಕಾರ್ಮಿಕರ ಸುರಕ್ಷತೆ ಹೊಣೆ ಮಾಲೀಕರದ್ದೇ

ಕಾರ್ಮಿಕ ದಿನಾಚರಣೆ; ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್

​ಪ್ರಜಾವಾಣಿ ವಾರ್ತೆ
Published 4 ಮೇ 2019, 1:29 IST
Last Updated 4 ಮೇ 2019, 1:29 IST
ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ಉದ್ಘಾಟಿಸಿದರು
ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ಉದ್ಘಾಟಿಸಿದರು   

ತುಮಕೂರು: ‘ಕೈಗಾರಿಕೆಗಳು, ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಲೀಕರು ಅಗತ್ಯ ಸುರಕ್ಷತೆಯನ್ನು ಒದಗಿಸಬೇಕು. ಸುರಕ್ಷತೆ ಒದಗಿಸುವುದು ಮಾಲೀಕರದ್ದೇ ಹೊಣೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಭೀಮಸಂದ್ರದ ಮೆ.ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈವೆಟ್ ಲಿಮಿಟೆಡ್‌ ಏರ್ಪಡಿಸಿದ್ದ ‘ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.

‘ಕಾರ್ಮಿಕರು ಈ ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಈ ನಿಟ್ಟಿನಲ್ಲಿ ಕಾರ್ಖಾನೆಗಳ ಮಾಲೀಕರು ಪ್ರತಿಯೊಬ್ಬ ಕಾರ್ಮಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು’ ಎಂದು ಸೂಚಿಸಿದರು.

ADVERTISEMENT

ಕಾನೂನು ಸೇವಾ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಕೆ.ಎಸ್.ರೊಟ್ಟೇರ್ ಮಾತನಾಡಿ, ‘ಕಾರ್ಮಿಕರು ತಮ್ಮ ಹಕ್ಕುಗಳು ಹಾಗೂ ಕಾನೂನು ರೀತಿ ಬರಬೇಕಾದ ಸೌಲಭ್ಯಗಳ ಬಗ್ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ಕಾನೂನು ಸಲಹೆಗಳನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿ ಎಂ.ಮಹದೇವಪ್ಪ ಮಾತನಾಡಿ, ‘ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರು ಪ್ರಯಾಣಿಸಬಾರದು’ ಎಂದು ಹೇಳಿದರು.

ಕಾರ್ಮಿಕ ಅಧಿಕಾರಿ ಜಿ.ಟಿ ನಿರಂಜನ್ ಅವರು ಕಾರ್ಮಿಕರಿಗೆ ಒದಗಿಸಬೇಕಾದ ಕನಿಷ್ಠವೇತನ, ಉಪಧನ, ಬಾಲ ಕಾರ್ಮಿಕ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಮಿಕ ನಿರೀಕ್ಷಕರಾದ ಜಯಪ್ರಕಾಶ್ ಹಾಗೂ ಭಾರತಿ, ಶಾಹಿ ಎಕ್ಸ್‌ಪೋರ್ಟ್‌ನ ಕಲ್ಯಾಣ ಅಧಿಕಾರಿ ಶ್ವೇತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.