ತುಮಕೂರು: ಇಲ್ಲಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಬೆಳಿಗ್ಗೆಯೇ ಸ್ವಾಮೀಜಿ ಅವರ ಕ್ರಿಯಾ ಸಮಾಧಿ ಗದ್ದುಗೆಗೆ ಮಠಾಧೀಶರು ಪೂಜೆ ಸಲ್ಲಿಸಿದರು.
ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಿನ ಜಾವ ರುದ್ರಾಭಿಷೇಕ ನೆರವೇರಿತು.
ಬಂಡೇ ಮಠದ ಸ್ವಾಮೀಜಿ, ಹೊನ್ನಮ್ಮಗವಿ ಮಠದ ಸ್ವಾಮೀಜಿ ಸೇರಿದಂತೆ ನಾನಾ ಮಠಾಧೀಶರು ಪೂಜೆ ಮತ್ತು ರುದ್ರಾಭಿಷೇಕದಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.