ತುಮಕೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ನಗರದ ಕನ್ನಡ ಭವನದಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು
ಪ್ರಶಸ್ತಿಗೆ ಆಯ್ಕೆಯಾದವರಿಗೆ ಆಯಾ ಭಾಗದಲ್ಲೇ ಪ್ರಶಸ್ತಿ ವಿತರಣೆ ಮಾಡಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ ಕಲಾವಿದರಿಗೆ ಪ್ರಶಸ್ತಿ ನೀಡಲಾಯಿತು.
ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತರಾದ ಡಾ.ಆನಂದರಾಮ ಉಪಾಧ್ಯ (ಬೆಂಗಳೂರು), ಕೆ.ಸಿ.ನಾರಾಯಣ (ಬೆಂಗಳೂರು ಗ್ರಾಮಾಂತರ), ಚಂದ್ರು ಕಾಳೇನಹಳ್ಳಿ (ಚನ್ನರಾಯಪಟ್ಟಣ), ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾದ ಮುಖವೀಣೆ ರಾಜಣ್ಣ, ಎ.ಜಿ.ಅಶ್ವಥನಾರಾಯಣ (ತುಮಕೂರು), ಪುಸ್ತಕ ಬಹುಮಾನ ಪುರಸ್ಕೃತರಾದ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ (ಚಿತ್ರದುರ್ಗ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್.ರಂಗಪ್ಪ, ಸಾಹಿತಿ ಬಾ.ಹ.ರಮಾಕುಮಾರಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.