ADVERTISEMENT

ಗಣರಾಜ್ಯೋತ್ಸವ; ಯಶಸ್‌ಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2019, 16:57 IST
Last Updated 25 ಡಿಸೆಂಬರ್ 2019, 16:57 IST
ಯಶಸ್
ಯಶಸ್   

ಹುಳಿಯಾರು: ಪಟ್ಟಣದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕಳೆದ ವರ್ಷ 10ನೇ ತರಗತಿಯಲ್ಲಿ ಸಿಬಿಎಸ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಯಶಸ್‌ ಅವರಿಗೆ ಈ ಬಾರಿ ಜ. 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದೆ.

2018-19ನೇ ಸಾಲಿನ ಸಿಬಿಎಸ್‌ಸಿ ಮಾಧ್ಯಮದಲ್ಲಿ ರಾಜ್ಯಕ್ಕೆ ಹಾಗೂ ದಕ್ಷಿಣ ವಲಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದರು.

ಅವರು ಕಂದಿಕೆರೆ ಹೋಬಳಿ ಕಾಯಿತಿಮ್ಮನಹಳ್ಳಿ ಗ್ರಾಮದ ದೇವರಾಜು ಮತ್ತು ನೇತ್ರಾವತಿ ಅವರ ಪುತ್ರ. ಸದ್ಯ ಬೆಂಗಳೂರಿನ ನಾರಾಯಣ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.