ADVERTISEMENT

ಅಪಘಾತದಲ್ಲಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 3:42 IST
Last Updated 29 ಜುಲೈ 2022, 3:42 IST

ತುಮಕೂರು: ರಸ್ತೆ‌ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಸಚಿನ್ (21) ಮೃತಪಟ್ಟ ಘಟನೆ ನಗರದ ಹನುಮಂತಪುರ ಸೇತುವೆ ಬಳಿ ಗುರುವಾರ ಮಧ್ಯರಾತ್ರಿ ನಡೆದಿದೆ.

ಗಾಯಗೊಂಡಿರುವ ಬೈಕ್ ಸವಾರ ಮಲ್ಲಿಕಾರ್ಜುನ್ (24) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಚಿನ್ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಹೋಬಳಿಯ ಶಂಕರಿಕೊಪ್ಪದ ನಿವಾಸಿ, ಬೈಕ್ ಸವಾರ ಮಲ್ಲಿಕಾರ್ಜುನ್ ಬೊಮ್ಮನಹಳ್ಳಿ ಹೋಬಳಿಯ ಹಾಡೂರು ಗ್ರಾಮದವರು. ಬೆಂಗಳೂರಿನಿಂದ ಶಿರಾ ಕಡೆಗೆ ಪಲ್ಸರ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.