ADVERTISEMENT

ಚಾಕುವಿನಿಂದ ಹೊಟ್ಟೆಗೆ ಚುಚ್ಚಿ ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 19 ಮೇ 2020, 5:10 IST
Last Updated 19 ಮೇ 2020, 5:10 IST
   

ಕೊರಟಗೆರೆ: ಅನೈತಿಕ ಸಂಬಂಧದ ಶಂಕೆಯಿಂದ ಕಾರು ಚಾಲಕನ ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ಮಧ್ಯರಾತ್ರಿ ನಡೆದಿದೆ. ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇಶಪುರ ಗ್ರಾಮದ ಹನುಮಂತರಾಯಪ್ಪನ ಮಗ ಗಿರೀಶ್ ಕೊಲೆಯಾದ ಯುವಕ.

ಬೆಂಗಳೂರು ನಗರದಲ್ಲಿ ಕಾರು ಚಾಲಕನಾಗಿದ್ದ ಮೃತ ಗಿರೀಶ್, ಕೊರೊನಾ ಲಾಕ್‌ಡೌನ್‌ನಿಂದ ಕಳೆದ 20 ದಿನದ ಹಿಂದೆ ಸ್ವಗ್ರಾಮ ಮಲ್ಲೇಶಪುರಕ್ಕೆ ಆಗಮಿಸಿದ್ದ. ಮಲ್ಲೇಶಪುರದ ನಂಜುಂಡಪ್ಪನ‌ ಮಗ ನಟರಾಜು ಮತ್ತು ಗಿರೀಶ್ ನಡುವೆ ಕುಡಿದ ಅಮಲಿನಲ್ಲಿ ಅನೈತಿಕ ಸಂಬಂಧ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೊಲೆಯಲ್ಲಿ ಅಂತ್ಯಕಂಡಿದೆ.

ತುಮಕೂರು ಎಸ್ಪಿ ಡಾ.ಕೆ.ವಂಶಿಕೃಷ್ಣ, ಮಧುಗಿರಿ ಡಿವೈಎಸ್ಪಿ ಧರಣೀಶ್, ಕೊರಟಗೆರೆ ಸಿಪಿಐ ನಧಾಪ್, ಪಿಎಸ್‌ಐ ಮುತ್ತುರಾಜು ಬೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.