ADVERTISEMENT

ತಿಪಟೂರು: ಕುಡಿದ ಅಮಲಿನಲ್ಲಿ ಗ್ಯಾಸ್‌ಗೆ ಬೆಂಕಿ, ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 8:46 IST
Last Updated 8 ಸೆಪ್ಟೆಂಬರ್ 2020, 8:46 IST
   

ತಿಪಟೂರು (ತುಮಕೂರು): ಕುಡಿದ ಅಮಲಿನಲ್ಲಿ ಯುವಕನೊಬ್ಬ ಗ್ಯಾಸ್‌ಗೆ ಬೆಂಕಿ ಹಚ್ಚಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕು ಹೊನ್ನವಳ್ಳಿ ಹೋಬಳಿ ಆದಿನಾಯಕನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.

ಧ್ರುವರಾಜ್ (32) ಮೃತ ಯುವಕ. ಸೋಮವಾರ ರಾತ್ರಿ 8 ಗಂಟೆ ಸಮಯದಲ್ಲಿ ತೋಟದ ಮನೆಯಲ್ಲಿ ತಂಗಿದ್ದ ಯುವಕ ಕುಡಿದ ಅಮಲಿನಲ್ಲಿ ಮನೆಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ ಪೈಪ್ ತೆಗೆದು ದಬ್ಬಳದಿಂದ ಚುಚ್ಚಿ ಗ್ಯಾಸ್ ಹೊರಬಿಟ್ಟು ಬೆಂಕಿಹಚ್ಚಿಕೊಂಡಿದ್ದಾನೆ.

ತೋಟದ ಮನೆಯಲ್ಲಿ ಧೃವರಾಜ್‌ನೊಂದಿಗೆ ತಾಯಿ ಜಯಮ್ಮ ವಾಸವಿದ್ದರು. ತಾಯಿ ತೋಟದ ಮನೆಯಿಂದ ಊರೊಳಗೆ ಹೋಗಿರುವ ವೇಳೆ ಈ ಘಟನೆ ನಡೆದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಆರಿಸುವಷ್ಟರಲ್ಲಿ ಧೃವರಾಜ್ ಮೃತಪಟ್ಟು, ಮನೆ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ADVERTISEMENT

ಹೊನ್ನವಳ್ಳಿ ಸಬ್ ಇನ್‌ಸ್ಪೆಕ್ಟರ್ ಶಂಕರಪ್ಪ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.