ADVERTISEMENT

ನೇಣಿಗೆ ಯುವಕ ಶರಣು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 5:30 IST
Last Updated 7 ಆಗಸ್ಟ್ 2020, 5:30 IST

ಮೈಸೂರು: ಇಲ್ಲಿನ ಕುವೆಂಪು ನಗರದ ಎಸ್‌ಬಿಎಂ ಕಾಲೊನಿಯ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೆಸರೆ ನಿವಾಸಿ ಶಿವಪ್ರಸಾದ್‌ (24) ಆತ್ಮಹತ್ಯೆಗೆ ಶರಣಾದ ಯುವಕ.

ಈತ ಬಿಬಿಎಂ ಮುಗಿಸಿದ ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ವೈರಸ್‌ನ ಭೀತಿಯಿಂದ ಮನೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದ. ʻಜೀವನದಲ್ಲಿ ನಾನು ಬಯಸಿದ ಲೈಫ್‌ ಸಿಗಲಿಲ್ಲʼ ಎಂದು ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿದೆ.

ADVERTISEMENT

ಕುವೆಂಪು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.