ADVERTISEMENT

ಉಡುಪಿ ಸಾಂಸ್ಕೃತಿಕ ನಗರ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2017, 6:08 IST
Last Updated 19 ಡಿಸೆಂಬರ್ 2017, 6:08 IST
ನೃತ್ಯನಿಕೇತನ ರಜತಪಥದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪೇಜಾವರ ಮಠದ ಕಿರಿಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿದರು.
ನೃತ್ಯನಿಕೇತನ ರಜತಪಥದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪೇಜಾವರ ಮಠದ ಕಿರಿಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿದರು.   

ಉಡುಪಿ: ‘ಉಡುಪಿ ಜಿಲ್ಲೆಯನ್ನು ಸಾಂಸ್ಕೃತಿಕ ನಗರವನ್ನಾಗಿಸುವಲ್ಲಿ ನೃತ್ಯ, ನಾಟಕ ಹಾಗೂ ಸಂಗೀತ ಶಾಲೆಗಳು ಪ್ರಮುಖ ಪಾತ್ರವಹಿಸಿವೆ’ ಎಂದು ಪರ್ಯಾಯ ಪೇಜಾವರ ಮಠದ ಕಿರಿಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು. ನೃತ್ಯನಿಕೇತನ ಕೊಡವೂರು ಸಂಸ್ಥೆ ಸೋಮವಾರ ನಗರದಲ್ಲಿ ಆಯೋ ಜಿಸಿದ್ದ ರಜತಪಥದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಇತರೆ ಜಿಲ್ಲೆಗಳಲ್ಲಿ ಮಕ್ಕ ಳಿಗೆ ಸಾಂಸ್ಕೃತಿಕ ತರಬೇತಿ ಕೇಂದ್ರಗಳ ಕೊರತೆ ಎದ್ದು ಕಾಣುತ್ತಿದೆ. ಶಿಷ್ಯನಿಗೆ ಗುರುವಿನ ಆಶ್ರಯ ಸಿಗುವ ತನಕ ವಿದ್ಯೆ ಒಲಿಯುವುದಕ್ಕೆ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಉಡುಪಿಯ ಜನತೆ ಸೌಭಾ ಗ್ಯವಂತರು. ಇಲ್ಲಿನ ಸಂಗೀತ, ನೃತ್ಯ, ನಾಟಕ ಶಾಲೆಗಳು ಹಾಗೂ ಗುರುಗಳು ಸಮರ್ಥವಾದ ತಮ್ಮ
ದಾಯಕತ್ವದಿಂದ ಸಮಾಜವ ನ್ನು ಸಾಂಸ್ಕೃತಿಕ ನಗರವಾಗಿ ಪರಿರ್ವತಿಸಿದ್ದಾರೆ ಎಂದರು.

ಕಲಾವಿದ ಎಂ.ಎಲ್ ಸಾಮಗ, ಪ್ರತಿಭಾ ಸಾಮಗ, ಉದ್ಯಮಿ ಯು. ವಿಶ್ವನಾಥ್ ಶೆಣೈ, ಬೆಂಗಳೂರು ಕಲಾದರ್ಶಿನಿ ಅಧ್ಯಕ್ಷ ಶ್ರೀನಿವಾಸ ಸಾಸ್ತಾನ, ಸಿ. ಆನಂದ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಅಧ್ಯಕ್ಷ ಉದಯ ಶೆಟ್ಟಿ ಉಪಸ್ಥಿತರಿದ್ದರು. ಚಂದ್ರಶೇಖರ್ ಕೊಡವೂರು ಕಾರ್ಯ ಕ್ರಮ ನಿರೂಪಿಸಿದರು, ಸುಧೀರ್ ರಾವ್ ಸ್ವಾಗತಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.