ADVERTISEMENT

ಕಾಪಾಡು ದುರ್ಗಾಪರಮೇಶ್ವರಿ

ಮಂದಿರ, ಮಸೀದಿ ಚರ್ಚ್‌ ಸುತ್ತಾಟದಲ್ಲಿ ಸಚಿವ ಪ್ರಮೋದ್

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 13:41 IST
Last Updated 26 ಏಪ್ರಿಲ್ 2018, 13:41 IST
ಹೆರ್ಗದ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಪ್ರಮೋದ್ ಮಧ್ವರಾಜ್ ದೇವರ ದರ್ಶನ ಪಡೆದರು.
ಹೆರ್ಗದ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಪ್ರಮೋದ್ ಮಧ್ವರಾಜ್ ದೇವರ ದರ್ಶನ ಪಡೆದರು.   

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಬುಧವಾರ ಇಡೀ ದಿನ ಕ್ಷೇತ್ರದ ಹಲವಾರು ದೇವಸ್ಥಾನಗಳು, ಚರ್ಚ್‌ ಹಾಗೂ ಮಸೀದಿಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ನೀಲಾವರದ ದುರ್ಗಾಪರಮೇಶ್ವರಿ ದೇವಸ್ಥಾನ, ಕನ್ನಾರು ಬೊಬ್ಬರ್ಯ ದೇವಸ್ಥಾನ, ಸೂರೆಬೆಟ್ಟು ಸಿದ್ಧಿವಿನಾಯಕ ದೇವಸ್ಥಾನ ಚೇರ್ಕಾಡಿ ವಿಷ್ಣುಮೂರ್ತಿ ದೇವಸ್ಥಾನ ಪಾಡಿಗಾರು, ದೊಡ್ಡ ಣಗುಡ್ಡೆಯ ಶ್ರೀ ವೀರಮಾರುತಿ ವ್ಯಾಯಾಮ ಶಾಲೆ. ಬ್ರಹ್ಮಬೈದರ್ಕಳ ಗರಡಿ ಕಲ್ಮಾಡಿಗೆ ತೆರಳಿ ಪೂಜೆ ಸಲ್ಲಿಸಿ, ಚುನಾವಣೆಯಲ್ಲಿ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದರು.

ಉಡುಪಿ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.

ADVERTISEMENT

ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್, ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್‌, ಕೊಳಲಗಿರಿಯ ಸೇಕ್ರೆಡ್ ಹಾರ್ಟ್ ಚರ್ಚ್, ಸಿರಿಯನ್ ಆಥ್ರೋಡಕ್ಸ್ ಚರ್ಚ್‌, ಕೆಮ್ಮಣ್ಣಿನ ಸಂತ ತೆರೆಸಾ ಚರ್ಚ್‌, ತೊಟ್ಟಂನ ಸಂತ ಅಮ್ಮನವರ ಚರ್ಚ್‌, ಪೆರಂಪಳ್ಳಿಯ ಫಾತಿಮಾ ಚರ್ಚ್‌ಗೆ ಅವರು ಭೇಟಿ ನೀಡಿದರು. ರೆಹಮಾನಿಯಾ ಜುಮಾ ಮಸೀದಿಗೂ ಸಚಿವ ಪ್ರಮೋದ್‌ ಅವರು ಭೇಟಿ ನೀಡಿದರು.

ಉಡುಪಿ ನಗರದ ಮೀನು ಮಾರಕಟ್ಟೆಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು ಮತ ನೀಡುವಂತೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.