ADVERTISEMENT

‘ಕಾರ್ಕಳದಲ್ಲಿ ₹700 ಕೋಟಿಗೂ ಅಧಿಕ ಕಾಮಗಾರಿ’

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2018, 11:04 IST
Last Updated 20 ಮಾರ್ಚ್ 2018, 11:04 IST

ಕಾರ್ಕಳ: ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಕಾರ್ಕಳದಲ್ಲಿ ₹700 ಕೋಟಿಗೂ ಅಧಿಕ ಕಾಮಗಾರಿ ನಡೆದಿದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು.

ತಾಲ್ಲೂಕಿನ ಹಿರ್ಗಾನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಗ್ರಾಮ ಸಭೆಯಲ್ಲಿ ವಿಧಾನಸಭಾ ಚುನಾವಣೆಗೆ ಪೂರ್ವಭಾವಿ ತಯಾರಿ ಕುರಿತು ಮಾತನಾಡಿದ ಅವರು, ಇನ್ನು ಬಾಕಿ ಉಳಿದ ಕಾಮಗಾರಿಗಳನ್ನು ಮುಂದಿನ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು. ಕ್ಷೇತ್ರದಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದರು.

ಹಿರ್ಗಾನದ ರಾಮಕೃಷ್ಣ ನಾಯಕ್, ಕ್ಷೇತ್ರಾಧ್ಯಕ್ಷ ಮಣಿರಾಜ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಶಕ್ತಿಕೇಂದ್ರದ ಅಧ್ಯಕ್ಷ ನಂದಕುಮಾರ್ ಹೆಗ್ಡೆ, ಜಿಲ್ಲಾ ಪಂಚಾಯಿತಿ ಸದಸ್ಯ ಉದಯ ಎಸ್.ಕೋಟ್ಯಾನ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.