
ಪ್ರಜಾವಾಣಿ ವಾರ್ತೆಉಡುಪಿ: ಅರಬ್ಬಿ ಸಮುದ್ರದಲ್ಲಿ ಹವಾಮಾನ ಅನುಕೂಲಕರವಾಗಿರದ ಕಾರಣ ಮಲ್ಪೆ ಮೀನುಗಾರಿಕಾ ಬಂದರಿನ ದೋಣಿಗಳು ಕಳೆದ ಒಂದು ವಾರದಿಂದ ಮೀನುಗಾರಿಕೆಗೆ ತೆರಳಿಲ್ಲ. ಸಾವಿರಾರು ದೋಣಿಗಳು ಮಲ್ಪೆ ಬಂದರಿನಲ್ಲಿ ಲಂಗರು ಹಾಕಿವೆ.
`ನಾಲ್ಕೈದು ದಿನಗಳ ಹಿಂದೆ ಕರಾವಳಿ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಹಾಗಾಗಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವುದು ಕಷ್ಟಕರವಾಗಿದೆ. ಮಂಗಳವಾರ ಸಮುದ್ರ ಸಹಜ ಸ್ಥಿತಿಗೆ ಮರಳಿದರೆ ಮೀನುಗಾರರು ಕಡಲಿಗೆ ಇಳಿಯಲಿದ್ದಾರೆ~ ಎಂದು ಮೀನುಗಾರರೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.