ADVERTISEMENT

ಮುದ್ರಾಡಿ ಪಂಚಾಯಿತಿ: ವಿಶೇಷ ಗ್ರಾಮಸಭೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 9:15 IST
Last Updated 10 ಡಿಸೆಂಬರ್ 2013, 9:15 IST

ಹೆಬ್ರಿ: ಮುದ್ರಾಡಿ ಗ್ರಾಮ ಪಂಚಾಯಿ­ತಿಯಲ್ಲಿ ಇತ್ತೀಚೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮಸಭೆ ನಡೆಯಿತು.

ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ವಾರ್ಡ್ ಸಭೆಯಲ್ಲಿ ಗ್ರಾಮಸ್ಥರಿಂದ ಬಂದ ಅರ್ಜಿಗಳನ್ನು ಮಂಡಿಸಿ ಸಭೆ­ಯಲ್ಲಿ ಅನುಮೋದನೆ ಪಡೆಯಲಾ­ಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಮಾರ್ಗ­ದರ್ಶಿ ಅಧಿಕಾರಿಯಾದ ತಾಲ್ಲೂಕು ಸಂಯೋಜಕಿ ವಾಣಿ ಉಪಾಧ್ಯಾಯ ಯೋಜನೆಯ ಸಮಗ್ರ ಮಾಹಿತಿ ನೀಡಿದರು.

ಮುದ್ರಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗುಣವತಿ ಶೆಟ್ಟಿಗಾರ್, ಮಾಜಿ ಅಧ್ಯಕ್ಷರಾದ ಕಬ್ಬಿನಾಲೆ ಚಂದ್ರಶೇಖರ ಬಾಯರಿ,  ಗುಂಡಾಳ ಸದಾಶಿವ ಶೆಟ್ಟಿ, ಪಂಚಾಯಿತಿ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೀರಯ್ಯ, ಕಾರ್ಯದರ್ಶಿ ಸದಾಶಿವ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.