ADVERTISEMENT

ವಾರ್ಡನ್ ನೇಮಕಕ್ಕೆ ಪ್ರತಿಭಟನೆ

ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2013, 10:50 IST
Last Updated 20 ಫೆಬ್ರುವರಿ 2013, 10:50 IST
ಬ್ರಹ್ಮಾವರ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾರ್ಡನ್ ಬೇಕು ಎಂದು ಆಗ್ರಹಿಸಿ ಮಂಗಳವಾರ ವಿದ್ಯಾರ್ಥಿಗಳು ಧರಣಿ ನಡೆಸಿದರು.
ಬ್ರಹ್ಮಾವರ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾರ್ಡನ್ ಬೇಕು ಎಂದು ಆಗ್ರಹಿಸಿ ಮಂಗಳವಾರ ವಿದ್ಯಾರ್ಥಿಗಳು ಧರಣಿ ನಡೆಸಿದರು.   

ಬ್ರಹ್ಮಾವರ: ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ವಾರ್ಡನ್ ಮರು ನೇಮಕ ಮಾಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಮಂಗಳವಾರ ಧರಣಿ ನಡೆಸಿದರು.

ಕಳೆದ 6ವರ್ಷಗಳಿಂದ ಪ್ರಭಾರ ವಾರ್ಡನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ  ನಾರಾಯಣ ಪೂಜಾರಿ ಅವರನ್ನು ಬಿಡುಗಡೆ ಗೊಳಿಸುವಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಸೋಮವಾರ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಿದ್ದರು.

ಆದರೆ ತಮಗೆ ಪೂಜಾರಿ ಅವರೇ ವಾರ್ಡನ್ ಆಗಿ ಇರಬೇಕು ಎಂದು ಆಗ್ರಹಿಸಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಳಗಿನ ಉಪಾಹಾರ ಸೇವಿಸದೇ 7.30ಕ್ಕೆ ಧರಣಿಗೆ ಕೂತರು. ಪ್ರಾಂಶುಪಾಲರು ಮತ್ತು ಅಧ್ಯಾಪಕರು ಅನೇಕ ಬಾರಿ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜವಾಗಲಿಲ್ಲ.

ಕೊನೆಗೆ ಸ್ಥಳಕ್ಕೆ ಆಗಮಿಸಿದ ಶಾಸಕ ಕೆ.ರಘುಪತಿ ಭಟ್ ಅವರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪೂಜಾರಿ ಅವರನ್ನು ಏಪ್ರಿಲ್‌ವರೆಗೆ ಮುಂದುವರಿಸುವಂತೆ ಆಗ್ರಹಿಸಿದರು. ನಂತರವಷ್ಟೇ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಿಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.