ಉಡುಪಿ: ಪರ್ಕಳದಿಂದ ಮಂಗಳೂರಿಗೆ ಗುರುವಾರ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೋಲ್ವೊ ಬಸ್ ಹಿಂಭಾಗದ ಎಂಜಿನ್ನಲ್ಲಿ ಹೊಗೆ ಕಾಣಿಸಿಕೊಂಡು ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು. ಸಾರ್ವಜನಿಕರೊಬ್ಬರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ.
ಉಡುಪಿ ಸರ್ವಿಸ್ ಬಸ್ ನಿಲ್ದಾಣದ ತಿರುವಿನಲ್ಲಿ ಬಸ್ ಎಂಜಿನ್ನಿಂದ ಹೊಗೆಯೇಳುತ್ತಿರುವುದನ್ನು ನೋಡಿದ ಸಾರ್ವಜನಿಕರೊಬ್ಬರು ಚಾಲಕನಿಗೆ ತಿಳಿಸಿದ್ದಾರೆ. ಚಾಲಕ ತಕ್ಷಣವೇ ಬಸ್ ನಿಲ್ಲಿಸಿ ಅದರಲ್ಲಿದ್ದ 15 ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಎಂಜಿನ್ನಲ್ಲಿ ಹೊಗೆಯಾಡುತ್ತಿದ್ದ ಬೆಂಕಿಯನ್ನು ಅರಿಸಲು ಸ್ಥಳೀಯರು ನೆರವಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.