ADVERTISEMENT

ಸಿಡಿಲು ಬಡಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2011, 19:30 IST
Last Updated 16 ಅಕ್ಟೋಬರ್ 2011, 19:30 IST

ಕಾರ್ಕಳ:  ತಾಲ್ಲೂಕಿನ ಬೈಲೂರು ಗ್ರಾಮದ ಯರ್ಲಪಾಡಿಯಲ್ಲಿ ಭಾನುವಾರ ಸಿಡಿಲು ಬಡಿದು  ಸುಜಾತಾ (42) ಎಂಬುವವರು ಮೃತಪಟ್ಟಿದ್ದಾರೆ.

ಸಿಡಿಲಿನಿಂದ ಕೂಡಿದ ಮಳೆಯಿಂದಾಗಿ ತಾಲ್ಲೂಕಿನಾದ್ಯಂತ ಅನೇಕ ಕಟ್ಟಡಗಳಿಗೆ ಹಾನಿ ಉಂಟಾಗಿದೆ.

ಹೆಬ್ರಿ ವರದಿ: ಹೆಬ್ರಿ ಪರಿಸರದಲ್ಲೂ ಅನೇಕ ಮನೆಗಳು ಹಾನಿಗೊಳಗಾಗಿವೆ.

ADVERTISEMENT

ವರಂಗ ಗ್ರಾ.ಪಂ. ವ್ಯಾಪ್ತಿಯ ಮುನಿಯಾಲಿನಲ್ಲಿ ಮರ ಬಿದ್ದು, ಪಶು ಚಿಕಿತ್ಸಾ ಕೇಂದ್ರ ಹಾಗೂ ಪದವಿ ಪೂರ್ವ ಕಾಲೇಜು ಕಟ್ಟಡಗಳಿಗೆ ಹಾನಿಯಾಗಿದೆ. ಮರ್ಣೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕಾಡುಹೊಳೆಯಲ್ಲಿ ಬಿರುಗಾಳಿಯಿಂದ ಮೂರು ಮನೆಗಳಿಗೆ ಹಾಗೂ ಬೆಳೆಗಳಿಗೆ ಹಾನಿ ಉಂಟಾಗಿದೆ. 10ಕ್ಕೂ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ.

ಮಂಗಳೂರು ನಗರದಲ್ಲೂ ಸಿಡಿಲಿನಿಂದ ಕೂಡಿದ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.