ADVERTISEMENT

ಹೆಬ್ರಿ: ಸಿಂಡಿಕೇಟ್ ಬ್ಯಾಂಕ್ ಪ್ರಬಂಧಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2013, 8:45 IST
Last Updated 4 ಏಪ್ರಿಲ್ 2013, 8:45 IST

ಹೆಬ್ರಿ: ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಹಲವು ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ ಹೆಬ್ರಿ ಶಾಖಾ ಹಿರಿಯ ಪ್ರಬಂಧಕರಾಗಿ ನಿವೃತ್ತರಾದ ಬಿ. ರಾಘವ ನಾಯಕ್ ಅವರ ಬೀಳ್ಕೊಡುಗೆ ಸಮಾರಂಭ ಶನಿವಾರ ಹೆಬ್ರಿ ಸಿಂಡಿಕೇಟ್ ಬ್ಯಾಂಕ್ ವಠಾರದಲ್ಲಿ ನಡೆಯಿತು.

ಉದ್ಯಮಿ ವಸಂತ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ರಾಘವ ನಾಯಕ್ ದಂಪತಿಯನ್ನು ಸನ್ಮಾನಿಸಲಾಯಿತು. ಹೆಬ್ರಿಯ ಉದ್ಯಮಿಗಳಾದ ಎಚ್. ಸತೀಶ್ ಪೈ, ಯೋಗೀಶ್ ಭಟ್, ಸಿಬ್ಬಂದಿ ಪರವಾಗಿ ಹರೀಶ್ ಮಾತನಾಡಿ ಪ್ರಬಂಧಕರ ಸೇವೆಯನ್ನು ಸ್ಮರಿಸಿದರು.

ಸಮಾರಂಭದಲ್ಲಿ ರಾಘವ ನಾಯಕ್, ಪ್ರಭಾವತಿ ಆರ್ ನಾಯಕ್, ಬ್ಯಾಂಕಿನ ಸಹಾಯಕ ಪ್ರಬಂಧಕ ರಾಜನ್ ಉಪಸ್ಥಿತರಿದ್ದರು. ಬ್ಯಾಂಕಿನ ಸಿಬ್ಬಂದಿ ದಿನೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.