ಉಡುಪಿ: ಉಡುಪಿಯ ಬಾಂಧವ್ಯ ಟ್ರಸ್ಟ್, ಬೆಂಗಳೂರಿನ ಟಾಲಿಮ್ಯಾಟಿಕ್ಸ್ ಮತ್ತು ಬಡಗುಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ ಆಟೊ ಚಾಲಕರಿಗೆ ವೃತ್ತಿ ಕೌಶಲ್ಯತೆ ಹೆಚ್ಚಿಸುವ, ಒತ್ತಡ ರಹಿತ ಜೀವನ ನಡೆಸುವ ಮತ್ತು ಪ್ರಯಾಣಿಕ ಸ್ನೇಹಿಯಾಗಿ ಸೇವೆ ನೀಡುವ ಕುರಿತು ತರಬೇತಿ ಕಾರ್ಯಕ್ರಮವನ್ನು ಉಡುಪಿಯ ಬಡಗುಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಬಡಗುಬೆಟ್ಟು ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಆಟೊ ಚಾಲಕರು ವೃತ್ತಿ ಕೌಶಲ್ಯ ಹೆಚ್ಚಿಸಿ ಗೌರವಯುತ ಜೀವನ ನಡೆಸಬೇಕು ಎಂದರು.
ಬೆಂಗಳೂರಿನ ಬೋಯನ್ಸಿ ಸಂಸ್ಥೆಯ ಮುಖ್ಯಸ್ಥ ಮತ್ತು ಅಂತಾರಾಷ್ಟ್ರೀಯ ತರಬೇತುದಾರ ಅಜಿತ್ ಕಾಯ್ಕಿಣಿ ಆಟೊ ಚಾಲಕರಿಗೆ ವೃತ್ತಿಪರತೆ ಕುರಿತು ಮಾಹಿತಿ ನೀಡಿದರು. ಉಡುಪಿ ರಿಕ್ಷಾ ಯೂನಿ ಯನ್, ಶಾರದಾ ಆಟೋ ಯೂನಿಯನ್ ಮತ್ತು ಜಯಕರ್ನಾಟಕ ಆಟೋ ಸಂಘಟನೆಯ ಸದಸ್ಯರು ಭಾಗವಹಿಸಿದ್ದರು. ಬಾಂಧವ್ಯ ಟ್ರಸ್ಟ್ನ ಕಾರ್ಯದರ್ಶಿ ಪಿ. ಲಕ್ಷ್ಮಣ್ ಶೆಣೈ ಸ್ವಾಗತಿಸಿದರು, ಕೋಶಾಧಿಕಾರಿ ಜನಾರ್ದನ ಭಂಡಾರ್ಕರ್ ವಂದಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಪ್ರಮೋದ್ ಮಧ್ವರಾಜ್ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.