ADVERTISEMENT

ಕ್ರೀಡಾಕೂಟಕ್ಕೆ ₹ 25 ಲಕ್ಷ ಅನುದಾನ ಭರವಸೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 15:10 IST
Last Updated 6 ಸೆಪ್ಟೆಂಬರ್ 2019, 15:10 IST
ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ನಿಯೋಗ ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಅಥ್ಲೆಟಿಕ್‌ ಕ್ರೀಡಾಕೂಟ ಆಯೋಜನೆಗೆ ಅನುದಾನ ನೀಡುವಂತೆ ಮನವಿ ಮಾಡಿತು.
ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ನಿಯೋಗ ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಅಥ್ಲೆಟಿಕ್‌ ಕ್ರೀಡಾಕೂಟ ಆಯೋಜನೆಗೆ ಅನುದಾನ ನೀಡುವಂತೆ ಮನವಿ ಮಾಡಿತು.   

ಉಡುಪಿ: ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ₹ 25 ಲಕ್ಷ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ನಿಯೋಗ ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಕ್ರೀಡಾಕೂಟ ಆಯೋಜನೆಗೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಮನವಿ ಸ್ಪಂದಿಸಿದ ಸಿಎಂ ₹ 25 ಲಕ್ಷ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ನಿಯೋಗದಲ್ಲಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ರಘುರಾಮ್ ನಾಯಕ್, ಕಾರ್ಯದರ್ಶಿ ದಿನೇಶ್ ಕುಮಾರ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಕಾರ್ಯದರ್ಶಿ ರಾಜವೇಲು, ಡಾ. ಕೃಷ್ಣಪ್ರಸಾಧ್, ಶಿವರಾಜ್ ಹೆಗ್ಡೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.