ಉಡುಪಿ: ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಗೆ ಜಿಲ್ಲೆಯಿಂದ ಯಾರೂ ಹೋಗಿಲ್ಲ. ಆದರೆ, ಇತರೆ ಕಾರ್ಯಗಳ ನಿಮಿತ್ತ ಜಿಲ್ಲೆಯ 16 ಜನ ದೆಹಲಿಗೆ ತೆರಳಿದ್ದರು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
16 ಜನರನ್ನೂ ಗುರುತಿಸಲಾಗಿದ್ದು, 9 ಮಂದಿಯನ್ನು ಆಸ್ಪತ್ರೆಯಯಲ್ಲಿ ಕ್ವಾರಟೈಂನ್ ಮಾಡಲಾಗಿದೆ. ಉಳಿದವರು ಬೇರೆ ಜಿಲ್ಲೆಗಳಲ್ಲಿದ್ದು, ಅಲ್ಲಿನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.