ADVERTISEMENT

ಉಡುಪಿ: ಬೈಂದೂರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಮೇ 2022, 13:57 IST
Last Updated 1 ಮೇ 2022, 13:57 IST
   

ಬೈಂದೂರು (ಉಡುಪಿ ಜಿಲ್ಲೆ): ಪ್ರಥಮ ಪಿಯುಸಿ ಫಲಿತಾಂಶದಲ್ಲಿ ಅನುತೀರ್ಣವಾಗುವ ಭಯದಿಂದ ಸುದೀಪ್‌ (17) ಎಂಬಾತ ಶನಿವಾರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಗ್ಗರ್ಸೆ ಗ್ರಾಮದ ಬೇಬಿ ಶೇಡ್ತಿ ಅವರ ಮಗ ಸುದೀಪ್‌ ಬೈಂದೂರು ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಏ.30ರಂದು ಆನ್‌ಲೈನ್‌ನಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಫೇಲ್ ಆಗುವ ಆತಂಕದಿಂದ ಮನೆಯಲ್ಲಿ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.