ADVERTISEMENT

ಬ್ರಹ್ಮಾವರದ ಬಳಿ 49 ಕೆ.ಜಿ ಗಾಂಜಾ ವಶ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 2:04 IST
Last Updated 23 ಆಗಸ್ಟ್ 2020, 2:04 IST
ಆರೋಪಿಗಳು ಮತ್ತು ಅವರಿಂದ ವಶಕ್ಕೆ ಪಡೆಯಲಾಗಿರುವ ಗಾಂಜಾ ಹಾಗೂ ಲಾರಿ
ಆರೋಪಿಗಳು ಮತ್ತು ಅವರಿಂದ ವಶಕ್ಕೆ ಪಡೆಯಲಾಗಿರುವ ಗಾಂಜಾ ಹಾಗೂ ಲಾರಿ    

ಉಡುಪಿ: ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಕ್ರಾಸ್ ಸಮೀಪ ಶನಿವಾರ ಗಾಂಜಾ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 49 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಾದ ಕುರತಪಾಂಡಿ ಹಾಗೂ ವಾನುವಲ್ ದಾರ್ ಎಂಬುವರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ನೋಂದಣಿಯ ಲಾರಿಯಲ್ಲಿ ಗಾಂಜಾವನ್ನು ಸಾಗಿಸಲಾಗುತ್ತಿತ್ತು.

ವಶಪಡಿಸಿಕೊಂಡ ಗಾಂಜಾ ಮೌಲ್ಯ 14.75 ಎಂದು ಅಂದಾಜಿಸಲಾಗಿದೆ. ಲಾರಿ ಹಾಗೂ 2 ಮೊಬೈಲ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.