ADVERTISEMENT

ಪಾರ್ಕಿಂಗ್‌ ಸ್ಥಳದಲ್ಲಿದ್ದ ಅಂಗಡಿ ತೆರವು

​ಪ್ರಜಾವಾಣಿ ವಾರ್ತೆ
Published 20 ಜನವರಿ 2018, 7:09 IST
Last Updated 20 ಜನವರಿ 2018, 7:09 IST
ನೆಲಸಮಗೊಂಡಿರುವ ಕೃಷ್ಣ ಮಠದ ರಾಜಾಂಗಣ ವಾಹನ ನಿಲುಗಡೆ ಸ್ಥಳದಲ್ಲಿದ್ದ ಅಂಗಡಿಗಳು.
ನೆಲಸಮಗೊಂಡಿರುವ ಕೃಷ್ಣ ಮಠದ ರಾಜಾಂಗಣ ವಾಹನ ನಿಲುಗಡೆ ಸ್ಥಳದಲ್ಲಿದ್ದ ಅಂಗಡಿಗಳು.   

ಉಡುಪಿ: ಕೃಷ್ಣ ಮಠದ ರಾಜಾಂಗಣ ವಾಹನ ನಿಲುಗಡೆ ಸ್ಥಳದಲ್ಲಿದ್ದ ಎರಡು ಅಂಗಡಿಗಳನ್ನು ಶಿರೂರು ಮಠದ ಲಕ್ಷ್ಮೀವರ ಸ್ವಾಮೀಜಿ ಅವರು ಶುಕ್ರವಾರ ತೆರವುಗೊಳಿಸಿದರು.

ಕೃಷ್ಣ ಮಠಕ್ಕೆ ಸೇರಿದ ಜಾಗದಲ್ಲಿದ್ದ ಅಂಗಡಿಗಳಲ್ಲಿ ತಿಂಡಿ– ತಿನಿಸು, ತಂಪು ಪಾನೀಯ, ಸ್ಮರಣಿಕೆ, ಹಾರ ಮುಂತಾದ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು. ಗ್ರಾಹಕರಿಂದ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ.

ನಕಲಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಅವರಿಗೆ ದೂರು ಬಂದಿತ್ತು. ಅಲ್ಲದೆ ಪ್ರವಾಸಿಗರ ವಾಹನ ನಿಲುಗಡೆಗೂ ತೊಂದರೆ ಮಾಡುತ್ತಿದ್ದರು ಎಂಬ ಆರೋಪ ಬಂದ ಹಿನ್ನಲೆಯಲ್ಲಿ ತೆರವು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ ಅವರು, ‘ಜನರಿಗೆ ಅನುಕೂಲವಾಗಲಿ, ಪ್ರವಾಸಿಗರಿಗೆ ಯಾವುದೇ ತೊಂದರೆ ಇರಬಾರದು ಎಂಬ ಕಾರಣಕ್ಕೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಹಣದ ಆಸೆಗಾಗಿ ಮಠದ ಕೆಲವರು ಅಂಗಡಿಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ತೆರವು ಮಾಡಲಾಯಿತು’ ಎಂದರು.

ಅಂಗಡಿ ತೆರವು ಮಾಡಿದ ಬಗ್ಗೆ ಯಾವುದೇ ದೂರು ಬಂದಿಲ್ಲ. ವಿಷಯ ತಿಳಿದ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಆದರೆ ಅಂಗಡಿ ಮಾಲೀಕರು ಅಲ್ಲಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.