ADVERTISEMENT

ಮಠಾಧೀಶರೊಂದಿಗೆ ಅಮಿತ್‌ ಶಾ ಸಭೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2018, 7:04 IST
Last Updated 21 ಫೆಬ್ರುವರಿ 2018, 7:04 IST
ಉಡುಪಿಯಲ್ಲಿ ಮಂಗಳವಾರ ರಾತ್ರಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಪೇಜಾವರ ಶ್ರೀ ಸಹಿತ ಹಲವು ಯತಿಗಳೊಂದಿಗೆ ಸಮಾಲೋಚನೆ ನಡೆಸಿದರು. ಪ್ರಜಾವಾಣಿ ಚಿತ್ರ
ಉಡುಪಿಯಲ್ಲಿ ಮಂಗಳವಾರ ರಾತ್ರಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಪೇಜಾವರ ಶ್ರೀ ಸಹಿತ ಹಲವು ಯತಿಗಳೊಂದಿಗೆ ಸಮಾಲೋಚನೆ ನಡೆಸಿದರು. ಪ್ರಜಾವಾಣಿ ಚಿತ್ರ   

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮಠಗಳ ಸ್ವಾಮೀಜಿಗಳೊಂದಿಗೆ ಮಂಗಳವಾರ ರಾತ್ರಿ ಇಲ್ಲಿ ಸಭೆ ನಡೆಸಿದರು. ಸುಮಾರು 45 ನಿಮಿಷ ನಡೆದ ಸಭೆಯಲ್ಲಿ ಬಿಜೆಪಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು ಎಂದು ತಿಳಿದು ಬಂದಿದೆ.

ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ, ‘ಮಹದಾಯಿ ವಿಚಾರದಲ್ಲಿ ಕೇಂದ್ರ ಮಧ್ಯಪ್ರವೇಶಿಸಿ. ರಾಜ್ಯದ ಜನರಿಗೆ ಅನುಕೂಲ ಮಾಡಿಕೊಡಬೇಕು. ಒಂದುವೇಳೆ ಕಾಂಗ್ರೆಸ್‌ ಸಹಕಾರ ನೀಡದಿದ್ದರೆ ಅದು ಅವರ ದೋಷವಾಗುತ್ತದೆ.

ಎಲ್ಲ ಧರ್ಮಗಳನ್ನು ಒಂದೇ ರೀತಿ ನೋಡಬೇಕು. ಅಲ್ಪಸಂಖ್ಯಾತರಿಗೆ ಒಂದು ಬಹು ಸಂಖ್ಯಾತರಿಗೆ ಒಂದೆಂಬಂತೆ ವ್ಯತ್ಯಾಸ ಮಾಡಬಾರದು. ಮಠಗಳನ್ನು ನಿಯಂತ್ರಣ ಮುಂತಾದ ಯೋಜನೆ ಹೀಗೆ ಯಾವುದೇ ವಿಷಯದಲ್ಲಿಯೂ ತಾರತಮ್ಯ ಇರಬಾರದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.