ADVERTISEMENT

ಹೆಜಮಾಡಿ: ವ್ಯಕ್ತಿ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 3:47 IST
Last Updated 8 ಆಗಸ್ಟ್ 2022, 3:47 IST

ಪಡುಬಿದ್ರಿ: ವಾಕಿಂಗ್‌ ಹೋಗಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಜಮಾಡಿ ರಾಮಪ್ಪ ಕಾಂಚನ ಹೌಸ್ ನಿವಾಸಿ ಕೃಷ್ಣಪ್ಪ ಬಂಗೇರ (72) ಸಂಜೆ ವಾಕಿಂಗ್ ಹೋದವರು ಇದುವರೆಗೂ ಬಂದಿಲ್ಲ ಎಂದು ದೂರು ನೀಡಲಾಗಿದೆ.

ಇವರು ಕನ್ನಡ, ತುಳು ಮಾತನಾಡುತ್ತಾರೆ. ಬಿಳಿ ಬಣ್ಣದ ಶರ್ಟು, ನೀಳಿ ಬಣ್ಣದ ಪಂಚೆ ಧರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT