ಉಡುಪಿ: ಕುಂದಾಪುರ ಉಪ ವಿಭಾಗಾಧಿಕಾರಿಯಾಗಿದ್ದ ಮಧುಕೇಶ್ವರ್ ಅವರ ವಸತಿ ಗೃಹದ ಮೇಲೆ ಗುರುವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.
ದಾಳಿ ವೇಳೆ ₹ 1.28 ಲಕ್ಷ ನಗದು, 23 ಫೈಲ್, ಒಂದು ರಿಜಿಸ್ಟರ್ ಪತ್ತೆಯಾಗಿದೆ. 2 ದಿನಗಳ ಹಿಂದೆ ಮಧುಕೇಶ್ವರ್ ವರ್ಗಾವಣೆಯಾಗಿದ್ದರು. ನೂತನ ಉಪ ವಿಭಾಗಾಧಿಕಾರಿ ರಾಜು ಅವರಿಗೆ ಅಧಿಕಾರವನ್ನೂ ಹಸ್ತಾಂತರ ಮಾಡಿದ್ದರು. ಆದರೂ, ವಸತಿ ಗೃಹದಲ್ಲಿ ಉಳಿದುಕೊಂಡು ಭೂವ್ಯಾಜ್ಯಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ವರ್ಗಾವಣೆಯಾದ ಬಳಿಕ ಯಾವುದೇ ಕಡತಗಳನ್ನು ವಿಲೇವಾರಿ ಮಾಡುವಂತಿಲ್ಲ. ಆದರೂ, ಮಧುಕೇಶ್ವರ್ ಹಳೆಯ ದಿನಾಂಕವನ್ನು ನಮೂದಿಸಿ ವಿಲೇವಾರಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ವಿಚಾರಣೆ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.