
ಕುಂದಾಪುರ: ಚಿತ್ರನಟ ಉಪೇಂದ್ರ ಅವರು ಪತ್ನಿ ನಟಿ ಪ್ರಿಯಾಂಕ ಉಪೇಂದ್ರ, ಪುತ್ರ ಆಯುಷ್ ಉಪೇಂದ್ರ ಸೇರಿದಂತೆ ಕುಟುಂಬ ಸಮೇತರಾಗಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಕೆ.ಶ್ರೀರಮಣ ಉಪಾಧ್ಯಾಯ ಅವರು ಉಪೇಂದ್ರ ದಂಪತಿಗೆ ದೇವರ ಪ್ರಸಾದ ನೀಡಿದರು. ಉಪೇಂದ್ರ ಅವರ ತಂದೆ ಮಂಜುನಾಥ್, ತಾಯಿ ಅನುಸೂಯ, ಸಹೋದರ ಸುಧೀಂದ್ರ, ಅತ್ತಿಗೆ ವೀಣಾ ಸುಧೀಂದ್ರ, ನಿರಂಜನ, ನಿದರ್ಶನ್, ಡಾ.ಕೃಷ್ಣ ಮತ್ತು ವಿಕ್ರಮ್, ದೇವಳದ ಪರ್ಯಾಯ ಅರ್ಚಕ ಕೆ.ವ್ಯಾಸ ಉಪಾಧ್ಯಾಯ ಮತ್ತು ಸಹೋದರರು, ದೇವಳದ ಮೊಕ್ತೇಸರ ಕೆ.ಪದ್ಮನಾಭ ಉಪಾಧ್ಯಾಯ, ಕೆ.ನಿರಂಜನ ಉಪಾಧ್ಯಾಯ, ದೇವಳದ ವ್ಯವಸ್ಥಾಪಕ ನಟೇಶ್ ಕಾರಂತ್ ಉಪಸ್ಥಿತದ್ದರು.
ಕೋಟೇಶ್ವರ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನಕ್ಕೂ ಉಪೇಂದ್ರ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾರ್ಕೋಡು ಗೋಪಾಲಕೃಷ್ಣ ಶೆಟ್ಟಿ ದೇವರ ಪ್ರಸಾದ ನೀಡಿ ಗೌರವಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.