ಉಡುಪಿ: 2020ರಅದಮಾರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಗುರುವಾರ ಅದಮಾರು ಮಠದ ಕಿರಿಯ ಯತಿ ಈಶಪ್ರಿಯ ತೀರ್ಥರು ಸ೦ಚಾರ ಆರಂಭಿಸಿದರು.
ಪರ್ಯಾಯ ಪಲಿಮಾರು ಮಠಾಧೀಶರಾದ ವಿದ್ಯಾಧೀಶ ತೀರ್ಥರು ಹಾಗೂ ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥರ ಉಪಸ್ಥಿತಿಯಲ್ಲಿ ಅದಮಾರು ಮಠದ ಕಿರಿಯ ಯತಿಗಳು ಶ್ರೀಕೃಷ್ಣ-ಮುಖ್ಯಪ್ರಾಣ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪಲಿಮಾರು ಶ್ರೀಗಳ ಆಶೀರ್ವಾದ ಪಡೆದು ಸಂಚಾರ ಆರಂಭಿಸಿದರು.
ಪಟ್ಟದ ದೇವರನ್ನು ಪಲ್ಲಕ್ಕಿಯಲ್ಲಿರಿಸಿ ರಾಜಾ೦ಗಣದ ಮು೦ಭಾಗದವರೆಗೂ ಮೆರವಣಿಗೆಯಲ್ಲಿ ಸಾಗಿ ಬರಲಾಯಿತು. ಪರ್ಯಾಯ ಶ್ರೀಗಳಿಂದ ಬೀಳ್ಕೊಡುಗೆ ಪಡೆದು ಸ೦ಚಾರಕ್ಕೆ ತೆರಳಿದರು.
ಪಲಿಮಾರು ಶ್ರೀಗಳ ಆಪ್ತ ಕಾರ್ಯದರ್ಶಿ ಗಿರೀಶ್ ಉಪಾಧ್ಯಯ, ಅದಮಾರು ಮಠದ ಅತಿಥಿಗೃಹದ ಮ್ಯಾನೇಜರ್ ಗೋವಿ೦ದ ರಾಜ್ ಸೇರಿದ೦ತೆ ಹಲವರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.