ADVERTISEMENT

ಮಂಗಳೂರಿನಲ್ಲಿ ಸ್ಫೋಟಕ: ಆದಿತ್ಯ ರಾವ್‌ನನ್ನು ಬ್ಯಾಂಕ್‌ಗೆ ಕರೆದೊಯ್ದು ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2020, 7:11 IST
Last Updated 25 ಜನವರಿ 2020, 7:11 IST
ಸ್ಫೋಟಕ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ನನ್ನು ಬ್ಯಾಂಕ್‌ಗೆ ಕರೆದೊಯ್ದು ಪರಿಶೀಲನೆ ನಡೆಸಿದ ಪೊಲೀಸರು
ಸ್ಫೋಟಕ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ನನ್ನು ಬ್ಯಾಂಕ್‌ಗೆ ಕರೆದೊಯ್ದು ಪರಿಶೀಲನೆ ನಡೆಸಿದ ಪೊಲೀಸರು   

ಉಡುಪಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಆರೋಪಿ ಆದಿತ್ಯರಾವ್‌ನನ್ನು ಶನಿವಾರ ಪೊಲೀಸರು ಇಲ್ಲಿನ ಕುಂಜಿಬೆಟ್ಟುವಿನಲ್ಲಿರುವ ಕರ್ಣಾಟಕ ಬ್ಯಾಂಕ್‌ಗೆ ಕರೆತಂದಿದ್ದಾರೆ.

ಆದಿತ್ಯ ರಾವ್‌ ಬ್ಯಾಂಕ್‌ನಲ್ಲಿ ಲಾಕರ್ ಹೊಂದಿದ್ದು, ಅದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ನಾಲ್ಕನೇ ಶನಿವಾರವಾದ್ದರಿಂದ ಬ್ಯಾಂಕ್‌‌ ರಜಾ ದಿನವಾದರೂ ಕೂಡಅಧಿಕಾರಿಗಳನ್ನು ಕರೆಸಿ ಬ್ಯಾಂಕ್ ತೆರೆಸಲಾಗಿದೆ. ಪೊಲೀಸ್ ಅಧಿಕಾರಿಗಳು ತಪಾಸಣೆ ಕೈಗೊಂಡಿದ್ದಾರೆ.

ADVERTISEMENT

ಮಂಗಳೂರು ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡ ತೀವ್ರ ಶೋಧ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.