ADVERTISEMENT

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 16:45 IST
Last Updated 24 ಜೂನ್ 2021, 16:45 IST
ಆಗುಂಬೆ ಘಾಟಿ-ಸಾಂದರ್ಭಿಕ ಚಿತ್ರ
ಆಗುಂಬೆ ಘಾಟಿ-ಸಾಂದರ್ಭಿಕ ಚಿತ್ರ   

ಉಡುಪಿ: ಮಳೆಗಾಲದಲ್ಲಿ ಭಾರಿ ವಾಹನಗಳ ಸಂಚಾರದಿಂದ ಆಗುಂಬೆ ಘಾಟಿ ರಸ್ತೆಯ ಮಣ್ಣು ಕುಸಿಯುವ ಅಪಾಯ ಇರುವುದರಿಂದ ಅ.15ರವರೆಗೆ ಆಗುಂಬೆ ಘಾಟಿಯಲ್ಲಿ ಅಧಿಕ ಬಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಭಾರಿ ವಾಹನಗಳು ಆಗುಂಬೆ ಘಾಟಿಯ ಬದಲಾಗಿ ಉಡುಪಿಯಿಂದ ಸಿದ್ದಾಪುರ, ಹೊಸಂಗಡಿ, ಬಾಳೆಬರೇ ಘಾಟ್, ಹುಲಿಕಲ್, ಮಾಸ್ತಿಕಟ್ಟೆ ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹೋಗಬಹುದು. ಮಂಗಳೂರು ಕಡೆಯಿಂದ ಕಾರ್ಕಳ, ಹೆಬ್ರಿ, ಸಿದ್ಧಾಪುರ,ಹೊಸಂಗಡಿ, ಬಾಳೆಬರೇ ಘಾಟ್, ಹುಲಿಕಲ್, ಮಾಸ್ತಿಕಟ್ಟೆ, ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗವನ್ನು ತಲುಪಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT