ADVERTISEMENT

ಆಗುಂಬೆ ಘಾಟಿ: ಎಲ್ಲ ವಾಹನ ಸಂಚಾರಕ್ಕೆ ಮುಕ್ತ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 15:11 IST
Last Updated 19 ಅಕ್ಟೋಬರ್ 2019, 15:11 IST

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ‘ಎ’ ಆಗುಂಬೆ ಘಾಟಿಯು ಲಘು ಹಾಗೂ ಭಾರಿ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಹಿಂದೆ, ಹೆಚ್ಚು ಮಳೆಬಿದ್ದ ಪರಿಣಾಮ ಘಾಟಿಯ ಕೆಲವು ತಿರುವುಗಳಲ್ಲಿ ಗುಡ್ಡ ಕುಸಿದಿತ್ತು.ದುರಸ್ತಿಗಾಗಿ ಎಲ್ಲ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು. ದುರಸ್ತಿ ಮುಗಿದ ನಂತರ ಸಾರ್ವಜನಿಕ ಹಿತ ದೃಷ್ಟಿಯಿಂದ ಲಘು ವಾಹನಗಳ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು.

ಪ್ರಸ್ತುತ ಘಾಟಿಯಲ್ಲಿ ಯಾವುದೇ ಗುಡ್ಡ ಕುಸಿತ ಹಾಗೂ ಮರಗಳು ಉರುಳಿ ಬಿದ್ದಿಲ್ಲ. ಸಂಚಾರಕ್ಕೆ ಅಡ್ಡಿಯಾಗುವ ಸಂಭವ ಇಲ್ಲ. ಹಾಗಾಗಿ, ಆಗುಂಬೆ ಘಾಟಿಯಲ್ಲಿ ಲಘು ವಾಹನ ಹಾಗೂ ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.