
ಉಡುಪಿ: ಮದ್ವವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ದೊಡ್ಡಣಗುಡ್ಡೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಉಡುಪಿ, ಕಮಲ್ ಎ. ಬಾಳಿಗಾ ಚಾರಿಟಬಲ್ ಟ್ರಸ್ಟ್ ಮತ್ತು ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ ಹಾಗೂ ಉಡುಪಿ ತಾಲ್ಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಶ್ರಯದಲ್ಲಿ ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ 2000ನೇ ಮದ್ಯವರ್ಜನ ಶಿಬಿರ ಈಚೆಗೆ ಜರುಗಿತು.
ಕರ್ನಾಟಕ ಮನೋ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಅನಿಲ್ ಕುಮಾರ್ ಎಂ.ಎನ್. ಉದ್ಘಾಟಿಸಿದರು. ಶಂಕರ್ ಕುಲಾಲ್ ಪೆರಂಪಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಡಾ. ಎ.ವಿ ಬಾಳಿಗ ಸಮೂಹ ಸಂಸ್ಥೆ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ ಭಂಡಾರಿ, ಡಾ. ಅಶೋಕ್ ಕುಮಾರ್, ಪ್ರಸನ್ನ ಕುಮಾರ್, ನಾಗರಾಜ್ ಶೆಟ್ಟಿ, ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ, ನೀರೇ ಕೃಷ್ಣಶೆಟ್ಟಿ, ಸುಂದರ್ ಜೆ. ಕಲ್ಮಾಡಿ, ಸತ್ಯಾನಂದ ನಾಯಕ್ ಇದ್ದರು.
ಮಹಾಬಲ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಂದ್ರ ನಾಯಕ್ ಸ್ವಾಗತಿಸಿದರು. ಬಾಲಚಂದ್ರ ನಿರೂಪಿಸಿದರು. ನಿತೇಶ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.