ಉಡುಪಿ: ‘ವಕ್ಫ್ ಉಳಿಸಿ, ಸಂವಿಧಾನ ರಕ್ಷಿಸಿ’ ಹೋರಾಟ ಸಮಿತಿ ವತಿಯಿಂದ ವಕ್ಫ್ ತಿದ್ದುಪಡಿ ಕಾಯ್ದೆ - 2025 ಅನ್ನು ವಿರೋಧಿಸಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ವಕ್ಫ್ ತಿದ್ದುಪಡಿ ಕಾಯ್ದೆ 2025 ಅಸಂವಿಧಾನಿಕವಾಗಿದ್ದು, ಅದು ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ. ಈ ತಿದ್ದುಪಡಿ ಕಾಯಿದೆಯನ್ನು ವಾಪಾಸ್ ಪಡೆಯಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ನಿಯೋಗದಲ್ಲಿ ಮುಹಮ್ಮದ್ ಮೌಲ, ಸಹಬಾಳ್ವೆಯ ಸಂಚಾಲಕ ಫಣಿರಾಜ್, ಸುಬಾನ್ ಹೊನ್ನಾಳ, ಇಸ್ಮಾಯಿಲ್ ಕಟಪಾಡಿ, ರಫೀಕ್ ಕುಂದಾಪುರ, ಮುಹ್ಮದ್ ಫೈಜ್, ಶಫಿ ಕಾಝಿ, ಜಿ.ಎಂ. ಶರೀಫ್, ಅಝೀಜ್ ಉದ್ಯಾವರ, ಶೇಖ್ ಸಯ್ಯದ್ ಫರೀದ್, ಯಾಸೀನ್ ಕೋಡಿಬೆಂಗ್ರೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.