ಬೈಂದೂರು: ಉಪ್ಪುಂದ-ನಂದನವನ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದ ಘಟನೆ ನಡೆದಿದೆ. ಗಾಯಾಳು ಪ್ರಸನ್ನನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸನ್ನ ಗೆಳೆಯ ಮನೋಜ ಖಾರ್ವಿ ಜೊತೆ ಹೊಟೇಲ್ಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಬುಧವಾರ ರಾತ್ರಿ ನಡೆದಿರುವ ಈ ಹಲ್ಲೆ ತಡವಾಗಿ ಬೆಳಕಿಗೆ ಬಂದಿದೆ.
ಹೋಟೆಲ್ ಬಳಿ ಸುದರ್ಶನ ಮತ್ತು ಯತೀಶ ಎನ್ನುವ ಸ್ಥಳೀಯರು ಪ್ರಸನ್ನ ಹಾಗೂ ಮನೋಜ್ ಜೊತೆ ವಾಗ್ವಾದ ನಡೆಸಿದ್ದರು. ಮಾತಿಗೆ ಮಾತು ಬೆಳೆದು ಸುದರ್ಶನ ತನ್ನ ಬಳಿಯಿದ್ದ ಚೂರಿಯಿಂದ ಪ್ರಸನ್ನನ ಮೇಲೆ ಹಲ್ಲೆ ಮಾಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.