ಉಡುಪಿ: ವೈಚಾರಿಕ ಸಾಹಿತ್ಯದ ಮೇರುಕೊಂಡಿಯಾಗಿದ್ದ ಡಾ.ಜಿ.ಭಾಸ್ಕರ್ ಮಯ್ಯ(70) ಗುರುವಾರ ಬೆಳಗಿನ ಜಾವ ನಿಧನರಾದರು.
ಕೋವಿಡ್ ತಗುಲಿದ್ದ ಅವರಿಗೆ ನಾಲ್ಕು ದಿನಗಳಿಂದ ಸಾಲಿಗ್ರಾಮದ ಪ್ರಣವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೃದಯಾಘಾತದಿಂದ ಭಾಸ್ಕರ್ ಮಯ್ಯ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರಿಗೆ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ಹಿಂದಿ ಪ್ರಾಧ್ಯಾಪಕರಾಗಿ ದೀರ್ಘಕಾಲ ಕಾರ್ಯ ನಿರ್ವಹಿಸಿದ್ದರು. 50ಕ್ಕೂ ಹೆಚ್ಚು ಕೃತಿಗಳನ್ನು ಅವರು ರಚಿಸಿದ್ದಾರೆ.
ಇದನ್ನೂ ಓದಿ... ಆಮ್ಲಜನಕಕ್ಕಾಗಿ ಕಣ್ಣೀರು: ಕೊನೆಗೂ ಬದುಕುಳಿಯಲಿಲ್ಲ ಸಿಆರ್ಪಿಎಫ್ ಯೋಧನ ತಾಯಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.