ADVERTISEMENT

ಶಿರೂರು ಬಳಿ ಕಾರು ಪಲ್ಟಿ: ನಾಲ್ವರಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 13:15 IST
Last Updated 6 ಜುಲೈ 2022, 13:15 IST
ಬೈಂದೂರಿನ ಶಿರೂರು ಪೇಟೆ ವೆಂಕಟ ರಮಣ ದೇವಸ್ಥಾನದ ಬಳಿ ಬುಧವಾರ ವೇಗವಾಗಿ ಚಲಿಸಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಬೈಂದೂರಿನ ಶಿರೂರು ಪೇಟೆ ವೆಂಕಟ ರಮಣ ದೇವಸ್ಥಾನದ ಬಳಿ ಬುಧವಾರ ವೇಗವಾಗಿ ಚಲಿಸಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.   

ಬೈಂದೂರು: ಶಿರೂರು ಪೇಟೆ ವೆಂಕಟ್ರಮಣ ದೇವಸ್ಥಾನದ ಬಳಿ ಬುಧವಾರ ಅತಿವೇಗವಾಗಿ ಚಲಿಸಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಕಾರಿನಲ್ಲಿದ್ದವರು ಉಡುಪಿಯವರಾಗಿದ್ದು ಬೆಳಗಾವಿಯಿಂದ ಉಡುಪಿಗೆ ವಾಪಾಸಾಗುತ್ತಿದ್ದಾಗ ದುರ್ಘಟನೆ ನಡೆದಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೈಂದೂರು ಪಿಎಸ್‌ಐ ಪವನ್ ನಾಯಕ್ ಭೇಟಿ ನೀಡಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.