ಉಡುಪಿ: ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಏ.22 ರಿಂದ ಜೂನ್ 5ರ ವಾಹನ ಸಂಚಾರ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಪರ್ಯಾಯ ಮಾರ್ಗ:ಕುಂದಾಪುರದಿಂದ ತೀರ್ಥಹಳ್ಳಿ ಹಾಗೂ ಶಿವಮೊಗ್ಗದ ಕಡೆಗೆ ಹೋಗುವ ಲಘು ವಾಹನಗಳು ಕುಂದಾಪುರ-ಹೆಮ್ಮಾಡಿ-ವಂಡ್ಸೆ-ಕೊಲ್ಲೂರು-ನಿಟ್ಟೂರು ಘಾಟಿ ಮಾರ್ಗವಾಗಿ ಅಥವಾ ಕುಂದಾಪುರ-ಕೋಟೇಶ್ವರ-ಹಾಲಾಡಿ-ಆಗುಂಬೆ ಮಾರ್ಗವಾಗಿ ಅಥವಾ ಕುಂದಾಪುರ-ಬಸ್ರೂರು-ಹುಣ್ಸೆಮಕ್ಕಿ-ಹಾಲಾಡಿ-ಆಗುಂಬೆ ಮಾರ್ಗವಾಗಿ ತೀರ್ಥಹಳ್ಳಿ ಹಾಗೂ ಶಿವಮೊಗ್ಗ ತಲುಪಬಹುದು.
ಕುಂದಾಪುರದಿಂದ ತೀರ್ಥಹಳ್ಳಿಗೆ ಹೋಗುವ ಭಾರಿ ವಾಹನಗಳು ಕುಂದಾಪುರ-ಭಟ್ಕಳ-ಹೊನ್ನಾವರ-ಸಾಗರ-ರಿಪ್ಪನ್ಪೇಟೆ ಮೂಲಕ ತೀರ್ಥಹಳ್ಳಿ ತಲುಪಬಹುದು. ಕುಂದಾಪುರದಿಂದ ಶಿವಮೊಗ್ಗ ಕಡೆಗೆ ಹೋಗುವ ಭಾರಿ ವಾಹನಗಳು ಕುಂದಾಪುರ-ಭಟ್ಕಳ-ಹೊನ್ನಾವರ-ಸಾಗರ ಮಾರ್ಗವಾಗಿ ಶಿವಮೊಗ್ಗ ತಲುಪಬಹುದು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.