ADVERTISEMENT

ಇಂದು ಬೆಳಪು ಉರುಸ್: ಸರ್ವ ಧರ್ಮದ ವ್ಯಾಪಾರಿಗಳಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 7 ಮೇ 2022, 3:36 IST
Last Updated 7 ಮೇ 2022, 3:36 IST
ಬೆಳಪು ಸೂಫಿ ಅಬ್ದುಲ್ ರೆಹಮಾನ್ ಶಾ ಬಾಬಾ ದರ್ಗಾ.
ಬೆಳಪು ಸೂಫಿ ಅಬ್ದುಲ್ ರೆಹಮಾನ್ ಶಾ ಬಾಬಾ ದರ್ಗಾ.   

ಪಡುಬಿದ್ರಿ: ಕೆಲವು ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಧರ್ಮೀಯ ವ್ಯಾಪಾರಸ್ಥರಿಗೆ ಅವಕಾಶವಿಲ್ಲ ಎಂಬ ಅಭಿಯಾನದ ಮಧ್ಯೆ ಇಲ್ಲಿನ ಬೆಳಪುವಿನ ಉರುಸ್‌ನಲ್ಲಿ ಸರ್ವಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಲು ದರ್ಗಾ ಸಮಿತಿ ನಿರ್ಣಯ ಕೈಗೊಂಡಿದೆ.

ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ಧ ಸೂಫಿ ಅಬ್ದುಲ್ ರೆಹಮಾನ್ ಶಾ ಬಾಬಾ ದರ್ಗಾ ಉರುಸ್ ಮೇ 7ರಂದು ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಕಡೆಯಿಂದ ಸಹಸ್ರಾರು ಜನರು ಭಾಗವಹಿಸುವ ನಿರೀಕ್ಷೆ ಇದೆ. ಈ ಬಗ್ಗೆ ದರ್ಗಾ ಸಮಿತಿಯು ವಿವಿಧ ಕಡೆಗಳಲ್ಲಿ ನಡೆಯುವ ಮತೀಯ ಸಂಘರ್ಷಕ್ಕೆ ಅವಕಾಶ ನೀಡದೆ, ಸರ್ವ ಧರ್ಮದ ಬಡ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಉಚಿತ ಅವಕಾಶ ಕಲ್ಪಿಸಿದೆ.

ದರ್ಗಾ ಸಮಿತಿಯ ಈ ನಿರ್ಣಯವನ್ನು ಬೆಳಪು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಶಾಂತಿ, ಸಾಮರಸ್ಯಕ್ಕೆ ರಾಜ್ಯಕ್ಕೆ ಮಾದರಿಯಾಗಿದೆ. ಈ ಹಿಂದಿನಿಂದಲೂ ಬೆಳಪು ವಿವಿಧ ಅಭಿವೃದ್ಧಿ ಕಾರ್ಯದಲ್ಲೂ ಮಾದರಿಯಾಗಿತ್ತು’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.