ಹೆಬ್ರಿ: ಚಾರ ಕ್ರಾಸ್ ಬಳಿ ಗುರುವಾರ ಲಾರಿ ಮತ್ತು ಟಿವಿಎಸ್ ಸ್ಕೂಟರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಹೆರ್ಗಲ್ ಭಾಸ್ಕರ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಭಾಸ್ಕರ ಶೆಟ್ಟಿ ಚಾರ ಸಂತೆ ಮಾರುಕಟ್ಟೆಗೆ ಹೋಗುತ್ತಿರುವಾಗ ಹೆಬ್ರಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿಯ ಚಕ್ರ ಮೈಮೇಲೆ ಹರಿದು ಸ್ಥಳದಲ್ಲೇ ಸಾವು ಸಂಭವಿಸಿದೆ.
ಅಪಘಾತದ ಬಳಿಕ ಲಾರಿ ಚರಂಡಿಗೆ ಡಿಕ್ಕಿಯಾಗಿದ್ದು ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಹೆಬ್ರಿ ಇನ್ಸ್ಪೆಕ್ಟರ್ ನಾಗರಾಜ್, ಪಿಎಸ್ಐ ಸುದರ್ಶನ್ ದೊಡ್ಡಮನಿ ಭೇಟಿ ನೀಡಿ ಪರಿಶೀಲಿಸಿದರು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.