ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನಿಮಿತ್ತ ಬಿಜೆಪಿ ಯುವ ಮೋರ್ಚಾ ಹಾಗೂ ಬೈಂದೂರು ಬಿಜೆಪಿ ಮಂಡಲ ಆಯೋಜಿಸಿರುವ ‘ಸೇವಾ ಪಾಕ್ಷಿಕ’ದ ಅಂಗವಾಗಿ ಗುರುವಾರ ರಕ್ತದಾನ ಶಿಬಿರ ನಡೆಯಿತು.
ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಬೈಂದೂರು ಬಂಟರ ಸಮುದಾಯದ ಭವನದಲ್ಲಿ ಶಿಬಿರ ಆಯೋಜಿಸಲಾಗಿತ್ತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ತಾರು ನವೀನ್ ಶೆಟ್ಟಿ ಉದ್ಘಾಟಿಸಿ, ‘ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತವು ಜಗತ್ತಿನ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ’ ಎಂದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಜಿಲ್ಲಾ ಪ್ರಧಾನ ಖಂಜಾಚಿ ಪ್ರವೀಣ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಮಡಿವಾಳ, ಸವಿತಾ ಕೋಟ್ಯಾನ್, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ ಕಾಲ್ತೋಡು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್, ಮಂಡಲದ ಉಪಾಧ್ಯಕ್ಷ, ವಿನೋದ್ ಭಂಡಾರಿ ಗುಜ್ಜಾಡಿ ಇದ್ದರು.
ಬೈಂದೂರು ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನುರ್ ಮೆಂಡನ್ ಸ್ವಾಗತಿಸಿದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ನಿರೂಪಿಸಿದರು. ಯುವಮೋರ್ಚಾ ಉಪಾಧ್ಯಕ್ಷ ಲೋಹಿತ್ ಶೆಟ್ಟಿ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.