ADVERTISEMENT

ಉಡುಪಿ: ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 6:10 IST
Last Updated 28 ಸೆಪ್ಟೆಂಬರ್ 2020, 6:10 IST
   
""

ಉಡುಪಿ: ರೈತ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕರೆ ನೀಡಲಾಗಿರುವ ರಾಜ್ಯ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಾರ್ವಜನಿಕ ಸಾರಿಗೆಗಳ ಸಂಚಾರ ಎಂದಿನಂತಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ತೆರೆದಿವೆ.

ಬೆಳಿಗ್ಗೆ ಹಲವು ಸಂಘಟನೆಗಳ ನಾಯಕರು ಬಂದ್‌ಗೆ ಬೆಂಬಲ ನೀಡುವಂತೆ ಖಾಸಗಿ ಬಸ್‌ ನಿಲ್ದಾಣಕ್ಕೆ ತೆರಳಿ ಮನವಿ ಮಾಡಿದರು. ಆದರೆ, ಸ್ಪಂದನೆ ಸಿಗಲಿಲ್ಲ. ಬಳಿಕ ಬಸ್ ಪ್ರವೇಶಿಸುವ ಮಾರ್ಗದಲ್ಲಿ ಕುಳಿತು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ವಶಕ್ಕೆ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.