
ಬ್ರಹ್ಮಾವರ: ಬಾಂಗ್ಲಾ ನುಸುಳುಕೋರರ ಬಗ್ಗೆ, ಪಾಕಿಸ್ತಾನಕ್ಕೆ ಜೈಕಾರ ಹಾಕುವ ದೇಶದ್ರೋಹಿಗಳ ಬಗ್ಗೆ ಸದಾ ಮೌನ ವಹಿಸುವ ಕಾಂಗ್ರೆಸ್ ನಾಯಕರು ಹಿಂದೂ ರಾಷ್ಟ್ರ ನೇಪಾಳದ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದರಿಂದ ದೇಶದ ಆಂತರಿಕ ಭದ್ರತೆಗೆ ಧಕ್ಕೆ ಆಗುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ ಕೋಟ ಹೇಳಿದ್ದಾರೆ.
ಭಾರತಕ್ಕೆ ನೇಪಾಳದವರು ಬರಲು ವೀಸಾ ಅಗತ್ಯವಿಲ್ಲ. ಉಡುಪಿ ಜಿಲ್ಲೆಯ ಬಂದರು, ಫಿಶ್ಮೀಲ್ ಮತ್ತಿತರ ಕಡೆಗಳಲ್ಲಿ 15 ಸಾವಿರಕ್ಕೂ ಮಿಕ್ಕಿ ನೇಪಾಳದ ವಲಸೆ ಕಾರ್ಮಿಕರಿದ್ದಾರೆ. ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ರೆಸಾರ್ಟ್ನಲ್ಲೂ ನೇಪಾಳಿಗರು ಕೆಲಸ ಮಾಡುತ್ತಿದ್ದು, ಈ ಬಗ್ಗೆ ಅವರು ಬ್ರಹ್ಮಾವರ ಪೋಲಿಸ್ ಠಾಣೆಗೆ ದಾಖಲೆ ಒದಗಿಸಿದ್ದಾರೆ. ಅವರು ಕಾನೂನು ಬಾಹಿರ ಚಟುವಟಿಕೆ ಮಾಡಿಲ್ಲ. ಕಾಂಗ್ರೆಸ್ನವರು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.