ADVERTISEMENT

ಜಗತ್ತಿನ ಮೊದಲ ಎಂಜಿನಿಯರ್ 'ವಿಶ್ವಕರ್ಮ': ಶೋಭಾಲಕ್ಷ್ಮೀ

ಕೋಟ ವಿಶಕರ್ಮ ದಿನಾಚರಣೆಯಲ್ಲಿ ತಹಶೀಲ್ದಾರ್‌ ಶೋಭಾಲಕ್ಷ್ಮೀ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2023, 13:49 IST
Last Updated 17 ಸೆಪ್ಟೆಂಬರ್ 2023, 13:49 IST
ಕೋಟ ವಿರಾಡ್ವಿಶ್ವಬ್ರಾಹಣ ಸಮಾಜೋದ್ಧಾರಕ ಸಂಘದ ಸಭಾಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಬ್ರಹ್ಮಾವರದ ಪ್ರಭಾರ ತಹಶೀಲ್ದಾರ್ ಶೋಭಾಲಕ್ಷ್ಮೀ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು
ಕೋಟ ವಿರಾಡ್ವಿಶ್ವಬ್ರಾಹಣ ಸಮಾಜೋದ್ಧಾರಕ ಸಂಘದ ಸಭಾಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಬ್ರಹ್ಮಾವರದ ಪ್ರಭಾರ ತಹಶೀಲ್ದಾರ್ ಶೋಭಾಲಕ್ಷ್ಮೀ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು   

ಸಾಲಿಗ್ರಾಮ(ಬ್ರಹ್ಮಾವರ): ‘ಜಗತ್ತಿನ ಮೊದಲ ಎಂಜಿನಿಯರ್ ವಿಶ್ವಕರ್ಮ. ಇಂದಿನ ಚಂದ್ರಯಾನದಂತಹ ಸಾಧನೆಗೆ ದೇವಶಿಲ್ಪಿ ವಿಶ್ವಕರ್ಮ ಪರಬ್ರಹ್ಮನ ಪ್ರೇರಣೆಯೂ ಇದೆ. ದ್ವಾರಕಾ ನಗರ, ಪುಷ್ಪಕ ವಿಮಾನಗಳ ಬಗ್ಗೆ ಪ್ರಾಚೀನ ಯುಗದಲ್ಲಿ ಇಂತಹ ಸಾಧನೆಗಳನ್ನು ಮಾಡಿರುವ ಉದಾಹರಣೆಯೂ ನಮ್ಮ ಕಣ್ಣ ಮುಂದಿದೆ’ ಎಂದು ಬ್ರಹ್ಮಾವರದ ಪ್ರಭಾರ ತಹಶೀಲ್ದಾರ್‌ ಶೋಭಾಲಕ್ಷ್ಮೀ ಹೇಳಿದರು.

ಕೋಟ ವಿರಾಡ್ವಿಶ್ವಬ್ರಾಹಣ ಸಮಾಜೋದ್ಧಾರಕ ಸಂಘ, ವಿಶ್ವಕರ್ಮ ಕಲಾವೃಂದ, ವಿಶ್ವಜ್ಯೋತಿ ಮಹಿಳಾ ಬಳಗದ ವತಿಯಿಂದ ಸಾಲಿಗ್ರಾಮದ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ನಡೆದ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಣೂರು ಸುಬ್ರಾಯ ಆಚಾರ್ಯ ದಂಪತಿಗಳ ಸಂಕಲ್ಪ ಪೂಜೆಯೊಂದಿಗೆ ವಿಶ್ವಕರ್ಮ ಯಜ್ಞ ಮಹೋತ್ಸವ ನಡೆಯಿತು.

ADVERTISEMENT

ತಹಶೀಲ್ದಾರ್‌ ಶೋಭಾಲಕ್ಷ್ಮೀ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಗೌರವಾಧ್ಯಕ್ಷ ಜನಾರ್ದನ್‌ ಆಚಾರ್ಯ ಚೇಂಪಿ, ಐರೋಡಿ ಕೇಶವ ಆಚಾರ್ಯ, ರಮೇಶ್‌ ಆಚಾರ್ಯ ಚೇಂಪಿ, ವೆಂಕಟೇಶ್‌ ಆಚಾರ್ಯ, ಸವಿತಾ ಚಂದ್ರ ಶೇಖರ ಆಚಾರ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.