ADVERTISEMENT

ಸಚಿವ ಸ್ಥಾನಕ್ಕೆ ಲಾಬಿ ಮಾಡಿ ಗೊತ್ತಿಲ್ಲ: ಹಾಲಾಡಿ ಶ್ರೀನಿವಾಸ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 20:12 IST
Last Updated 20 ಆಗಸ್ಟ್ 2019, 20:12 IST
ಹಾಲಾಡಿ ಶ್ರೀನಿವಾಸ ಶೆಟ್ಟಿ
ಹಾಲಾಡಿ ಶ್ರೀನಿವಾಸ ಶೆಟ್ಟಿ   

ಉಡುಪಿ: ‘ಲಾಬಿ ಮಾಡಿ ಸಚಿವ ಸ್ಥಾನ ಪಡೆಯುವುದು ನನಗೆ ಗೊತ್ತಿಲ್ಲ’ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.‌

ಮಂಗಳವಾರ ಹಾಲಾಡಿಯ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಚಿವ ಸ್ಥಾನಕ್ಕೆ ಗುಂಪುಗಾರಿಕೆ ಮಾಡುವುದಿಲ್ಲ. ವಾಮಮಾರ್ಗ ಹಿಡಿಯುವುದಿಲ್ಲ. ಜಾತಿ ರಾಜಕಾರಣ ಮಾಡಿಯೂ ಗೊತ್ತಿಲ್ಲ’ ಎಂದರು.

‘ಸಚಿವ ಸ್ಥಾನ ವಂಚಿತರು ಸಭೆಗೆ ಬರುವಂತೆ ಆಹ್ವಾನ ನೀಡಿದ್ದರು. ಆದರೆಎಲ್ಲಿಯೂ ಹೋಗದೆ ಕ್ಷೇತ್ರದಲ್ಲೇ ಇದ್ದೇನೆ. ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇನೆ. ಪಕ್ಷನಿಷ್ಠೆ ಪ್ರದರ್ಶಿಸಿದ್ದೇನೆ. ಪಕ್ಷೇತರ ಶಾಸಕನಾಗಿದ್ದಾಗಲೂ ಬಿಜೆಪಿಗೆ ಬೆಂಬಲಿಸಿದ್ದೇನೆ’ ಎಂದರು.

ADVERTISEMENT

ಪ್ರಮಾಣವಚನ ಸ್ವೀಕರಿಸುವಂತೆ ಯಾರಿಂದಲೂ ಆಹ್ವಾನ ಬಂದಿರಲಿಲ್ಲ‌. ಹಾಗಾಗಿ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬೆಂಗಳೂರಿಗೆ ಹೋಗಲಿಲ್ಲ ಎಂದರು.

ಬೆಂಬಲಿಗರ ಆಕ್ರೋಶ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬೆಂಬಲಿಗರು ಅಸಮಾಧಾನ ಹೊರಹಾಕಿದ್ದಾರೆ. 5 ಬಾರಿ ಶಾಸಕರಾಗಿರುವ ಹಾಲಾಡಿಗೆ ಸಚಿವ ಸ್ಥಾನ ನೀಡದಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

* ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.