ADVERTISEMENT

ಉಡುಪಿ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ, ಚಾಲಕನಿಗೆ ಗಂಭೀರ ಗಾಯ 

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 9:05 IST
Last Updated 6 ಸೆಪ್ಟೆಂಬರ್ 2019, 9:05 IST
   

ಉಡುಪಿ: ಕರಾವಳಿ ಬೈಪಾಸ್ ಬಳಿಯ ಲಕ್ಷ್ಮಿ ಸಭಾಭವನದ ಎದುರಿನ ವಿದ್ಯುತ್‌ ಕಂಬಕ್ಕೆ ಶುಕ್ರವಾರ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕಾರು ಸಂತೆಕಟ್ಟೆಯಿಂದ ಉಡುಪಿಗೆ ಬರುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಸಿಲುಕಿದ್ದ ಚಾಲಕ ಆನಂದ ಪದ್ಮನಾಭ ಎಂಬುವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.