ಹೆಬ್ರಿ: ಕಾರ್ಕಳ ತಾಲ್ಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆ ಹಂಚಿಕಟ್ಟೆ ಪಡ್ಡೆಲುಮಾರು ಎಂಬಲ್ಲಿ ಎರ್ಟಿಗಾ ಕಾರೊಂದು ಗದ್ದೆಗೆ ಉರುಳಿದ ಘಟನೆ ಬಾನುವಾರ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಅಜೆಕಾರಿನ ಉದ್ಯಮಿಯೊರ್ವರಿಗೆ ಸೇರಿದ ವಾಹನವಾಗಿದ್ದು ಕಾರ್ಕಳದಿಂದ ಅಜೆಕಾರಿಗೆ ಹೋಗುತ್ತಿತ್ತು. ಧಾರಾಕಾರವಾಗಿ ಸುರಿಯುತಿದ್ದ ಮಳೆಯಿಂದಾಗಿ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಾಯಕಾರಿ ತಿರುವು: ಪಡ್ಡೆಲುಮಾರು ತಿರುವು ಅಪಾಯಕಾರಿಯಾಗಿದ್ದು, ಕೆಲವು ಸಮಯಗಳಿಂದ ಸರಣಿ ಅಪಘಾತ ನಡೆದಿದ್ದು ಕಳೆದೆರಡು ವರ್ಷಗಳ ಹಿಂದೆ ₹1 ಕೋಟಿ ವೆಚ್ಚದಲ್ಲಿ ರಸ್ತೆಯನ್ನು ವಿಸ್ತರಣೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.