ADVERTISEMENT

ಗಾಂಜಾ ಸೇವನೆ: 10 ಮಂದಿ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 16:04 IST
Last Updated 25 ಮಾರ್ಚ್ 2023, 16:04 IST

ಉಡುಪಿ: ಮಣಿಪಾಲ ಸಮೀಪದ ಸರಳೆಬೆಟ್ಟು ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಸಾತ್ವಿಕ್ ಜೋಷಿ, ಗೋವಿಂದ ಆರ್.ನಾಯರ್, ಅಪೂರ್ವ ರಾಯ್‌, ಪುನೀತ್, ಅಖಿಲ್ ಮಿಶ್ರಾ, ಶಿಬಾಶಿಶ್‌ ದಾಸ್, ಯಶ್‌, ಅನುಜ ಉಮೇಶ ಹಾಗೂ ಕಾಪು ತಾಲ್ಲೂಕಿನ ಬಡಾ ಗ್ರಾಮದ ಉಚ್ಚಿಲದಲ್ಲಿ ಕೆವಿನ್‌ ಕುಲ್‌ದೀಪ್‌ ಮಜಲು, ಅಶ್ವಿನ್‌ಪೂಜಾರಿ ವಿರುದ್ಧ ಪೊಲೀಸರು ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಎಲ್ಲ ಆರೋಪಿಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದದಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT